This page has not been fully proofread.

"ಪರಿಶುದ್ಧ ಮನಸಿನ ಜಯಸಿಂಹ ನೃಪ ಕೇಳು
ಆನಂದ ತೀರ್ಥರ ಶ್ರೀಪಾದ ರೇಣು
ಪರಮಪಾವನ ಪೂಜ್ಯ, ಸುಜನ ಶಿರೋಧಾರ್ಯ
ಇದ ಭಜಿಪ ಸುಜನರಿಗೆ ಇಂದ್ರಪದ ಲಭಿಸುವುದು
ಅದೃಷ್ಟ ಹೀನರಿಗೆ ದುರ್ಲಭವು ಇದಹುದು
ಈ ಪಾದಧೂಳಿಯು ಕರುಣಿಸಲಿ ಮಂಗಳವ
 
"ಪರಿಚಯವೇ ಇಲ್ಲದ ಕಾನನದಿ ಕೂಡ
ಶೃಂಗರಾಜನು ಪುಷ್ಪ ಮಕರಂದ ಅರಿತಂತೆ
ಪಂಡಿತೋತ್ತಮರಾದ ಆ ತ್ರಿವಿಕ್ರಮರು
ಅಪರಿಚಿತ ಮಧ್ವರ ಅಪರಿಚಿತ ಸದ್ಗುಣವ
ಒಮ್ಮೆಗೇ ಅರಿತರು ಸ್ವಜ್ಞಾನ ಬಲದಿಂದ
ಇದರಲ್ಲಿ ಅಚ್ಚರಿಯು ಲವಲೇಶವೂ ಇಲ್ಲ
 
ಶ್ರೀ ಮಧ್ವಾಚಾರ್ಯರ ಆಕ ವರ್ಣನೆ
ಖಳಕುಲಕೆ ದ್ವೇಷದ ದೋಷವನು ಹೆಚ್ಚಿಸುತ
ಮಧ್ಯಮರಿಗೆಲ್ಲರಿಗೂ ಕೌತುಕವ ಹುಟ್ಟಿಸುತ
ಮುಕುತಿಪದ ಯೋಗ್ಯರಿಗೆ ಐಸಿರಿಯ ನೀಡುತ್ತ
ನಾಲ್ಕು ತಿಂಗಳ ವ್ರತವ ನಿಷ್ಠೆಯಲಿ ಮಾಡುತ್ತ
ಶ್ರೀ ಪೂರ್ಣಪ್ರಜ್ಞರು ವಿಷ್ಣು ಮಂಗಲದಲ್ಲಿ
ಹಲವು ರಾತ್ರಿಗಳನ್ನು ಸಂಭ್ರಮದಿ ಕಳೆದರು
 
ವಿಹಿತ ಕರ್ಮಗಳನ್ನು ಬಲ್ಲ ಜನರಲ್ಲಿ
ಮಧ್ವಮುನಿ ಉತ್ತಮರು, ಎಲ್ಲರೊಳು ಶ್ರೇಷ್ಠರು
ಬ್ರಾಹೀ ಮುಹೂರ್ತದಲ್ಲಿ ನಿದ್ದೆಯಿಂದೇಳುತ
ಸ್ನಾನಾದಿ ಕಾರ್ಯಗಳ ವಿಹಿತದಲಿ ಮುಗಿಸಿ
ಅರುಣ ಯವನಿಕೆಯೊಳಗೆ ಯೋಗ್ಯ ಯೋಗಾಸನದಿ
ನಾರಾಯಣ ಎಂಬ ಬ್ರಹ್ಮನನು ಸ್ಮರಿಸಿದರು
 
234 / ಶ್ರೀ ಸುಮಧ್ವ ವಿಜಯ ಕನ್ನಡ ಕಾವ್ಯ
 
5
 
6
 
7