This page has not been fully proofread.

೫೦
 
ಮೊದಲ ವಿರಹದಲಿ ಬೆಂದ ಸಖಿಗೆ ನೀ ಹೀಗೆ ಧೈರ್ಯ ಹೇಳಿ
ಶಿವನ ಬಸವ ನಗೆದಿರುವ ನಗದ ತುದಿಯಿಂದ ಕಾಲ ಕೀಳಿ ॥
ಮರಳಿ ಬಂದು, ಅವಳೊಸಗೆ ತಂದು, ನನಗೊಂದು ಬಾಳ ನೀಡು
ಕಳಚಿ ಬೀಳಲಿಹ ಕುಂದಕುಸುಮದೊಲು ಇಹುದು ನನ್ನ ಪಾಡು ॥
 
೫೧
 
ಒಪ್ಪಿಕೊಂಡೆಯಾ, ಅಪ್ಪಾ, ಹೇಳು ಈ ಬಂಧುಕೃತ್ಯವನ್ನು
ಇಲ್ಲವೆಂದು ನಾ ತಿಳಿಯೆ ನಿನ್ನ ಗಂಭೀರ ಮೌನವನ್ನು
ನೀರ ನೀಡಿ ಚಾದಗೆಗೆ, ಸುಮ್ಮನಿಹೆ. ಬೇರೆ ಸಾಕ್ಷ್ಯ ಬೇಕೆ
ತಮ್ಮ ಇಷ್ಟದವರಿಷ್ಟ ಮಾಡುವವ ಬಾಯಲಾಡಲೇಕೆ ? ।
 
ಶಿ
 
೫೨
 
ಸಿಕ್ಕ ಹಾಗೆ ನಾ ಬೇಡಿಕೊಂಡೆ, ಮಾಡಿದ್ದು ನನ್ನದನ್ನು
ಎನ್ನು ಗೆಳೆಯನಿವ, ಎನ್ನು ಅಗಲಿದವ, ಅಯ್ಯೋ ಪಾಪ, ಎನ್ನು
ತಿಳಿದ ನಾಡು ತಿರುಗಾಡು ಮೇಘವೇ ! ಮಾಟ ಆಟವಾಡಿ
ಬೇಡಿಕೊಂಬೆ ನಾ ಇರಲಿ ಎಂದಿಗೂ ಮೋಡ ಮಿಂಚುಗೂಡಿ ॥
 
ಕನ್ನಡ ಮೇಘದೂತ - ಭಾವಾನುವಾದ ಖಂಡಕಾವ್ಯ: ಲೇ : ದ. ರಾ. ಬೇಂದ್ರೆ (ಅಂಬಿಕಾತನಯದತ್ತ) ೪೫