This page has not been fully proofread.


 
ನೀರೆ ಕಾದವಗೆ ಶರಣು ಅಲ್ಲವೇ ? ಇನಿಯಳೆಡೆಗೆ ಓತು

ಒಯ್ಯೋ, ಧನಪತಿಯ ಮುನಿಸಿಗೀಡಾಗಿ ಅಗಲಿದವನ ಮಾತು

ಯಕ್ಷರಾಜನಾ ರಾಜಧಾನಿ ಅಲಕೆಗೆಯೆ ಹೋಗು ನೀನು

ಅಲ್ಲಿ ಶಿವನ ಮುಡಿಚಂದ್ರ ತೊಳೆವ ಮಹಮನೆಯ ಮಾಟವೇನು
 
es
 
? ॥ ೭
 
ಗಾಳಿ ಬಟ್ಟೆಯಲಿ ಬರವ ಕಂಡು ಕುರುಳೋಳಿ ಓರೆಮಾಡಿ

ದೂರ ಹೋದವರ ಹೆಣ್ಣು ನೋಡುವವು ನಿನ್ನನಾಸೆಗೂಡಿ ॥

ನೀನೆ ಬರಲು ಅವನಾವನಿರುವನೋ ನಲ್ಲಿಲೆ ಬಿಟ್ಟುಕೊಗೊಟ್ಟು,
 

ಬೇರೆಯವರ ಆಳಾಗಿ ಇರುವ ನಮ್ಮಂಥ ಜನರ ಬಿಟ್ಟು
 

 
॥ ೮
 
ಗಾಳಿ ಬೀಸುವದು ನಿನ್ನ ನೂಕಿಸುತ ಮಂದ ಮಂದವಾಗಿ

ಚೂಚು ಚಾಚಿ ಚಾದಗೆಯು, ಎಡಕೆ ಕೂಗುವದು ಚೆಂದವಾಗಿ

ಬೆದೆಯ ನೆನೆದು ಬೆಳ್ಳಕ್ಕಿ ಬರುವವೋ
ಬೆನ್ನಗಟ್ಟುವವು ಕಣ್ಣೆ ಸೊಬಗ ನೀ ತಂದೆ ಎಂದುಕೊಂಡು
 
ಸಾಲು ಸಾಲುಗೊಂಡು
 

 
೧೦
 

ಬೆನ್ನಗಟ್ಟುವವು ಕಣ್ಗೆ ಸೊಬಗ ನೀ ತಂದೆ ಎಂದುಕೊಂಡು ॥ ೯
 
ಎಷ್ಟು ದಿವಸ ಇನ್ನುಳಿದುವೆಂದು ದಿನದಿನವು ಲೆಕ್ಕವಾಗಿ

ಜೀವ ಹಿಡಿದುಕೊಂಡಿರುವ ನಿನ್ನ ಅತ್ತಿಗೆಯ ನೋಡು ಹೋಗಿ

ನಾರಿ ಹೃದಯದಲಿ ನಾರಿನೆಳೆಯುವೊಲು ಇಹುದು ಆಸೆಯೊಂದು

ಅಗಲಿದಾಗಲೇ ಕಳಚಿ ಬೀಳುವೆದೆ-ಹೂವ ಬಿಗಿದುಕೊಂಡು

 

 
ಮೊದಲ ಮೊಳಗಿಗೇ ಬಂಜುಗೆಟ್ಟಿತೋ ಭೂಮಿ ಅಣಬೆತಾಳಿ,
 

ಕಿವಿಗೆ ಸವಿಯೆನಿಪ ಮೊಳಗ ಕೇಳಿ ಮಾನಸಕೆ ಬಂತು ದಾಳಿ
 
?
 

ತುಂಡು ತಾವರೆಯ ಬುತ್ತಿ ಕಟ್ಟಿ ಕೈಲಾಸಕಾಗಿ ಸಾಗಿ

ಬಾನ ಬಯಲಿನಲಿ ಕೊನೆಗು ಬರುವವರಸಂಚೆ ಜೋಡಿಯಾಗಿ
 

 

 
'ಹೋಗಿ ಬರಲೋಲೊ' ಎಂದಪ್ಪಿ ಕೇಳು ಈ ಮುದ್ದು ಗೆಳೆಯನನ್ನು

ರಾಮಪಾದಗಳು ಮುದ್ದಿ ಮುದ್ರಿಸಿದವಿದರ ಮಗ್ಗುಲನ್ನು

ಕಾಲ ಕಾಲಕ್ಕೂ ನಿನ್ನ ಕಂಡು ಇದು ಮೈಯನರಳಿಸುವದು

ಅಗಲಿ ಬಲು ದಿನಕೆ ಬಂದೆ ಎಂದು ಬಿಸಿ ನೀರನುರುಳಿಸುವದು ॥
೪ ಕನ್ನಡ ಮೇಘದೂತ – ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇಂ