This page has not been fully proofread.

೧೩
 
ಹಾದಿ ಹೇಳುವೆನು ಕೇಳು ನಿನಗೆ ಅನುಕೂಲ ಪಯಣಕಾಗಿ
ಬಳಿಕ ನನ್ನ ಸಂದೇಶ ಕಿವಿಗೆ ಪರಿಣಮಿಸಲಮೃತವಾಗಿ
ತೊಳಲಿ ಬಳಲಿ ಗಿರಿ ಶಿಖರಗಳಲ್ಲಿ ಕಾಲಿಟ್ಟು ಸಾಗುವಾಗ
ರಣಿವ ತವಿಸು, ನೀರಿನಿಸೆ ಸವಿಸಿ ಆ ಹಳ್ಳ-ಕೊಳ್ಳದಾಗ ।
 
೧೮
 
ಗಿರಿಯ ಶೃಂಗವೇ ಹರಿದು ಹೋಗುವದೋ ಏನೋ ಎಂಬುದಾಗಿ
ಗಾಳಿ ಬೀಸುತಿರೆ ಸಿದ್ಧ-ಮುಗ್ಧಯರು ನೋಡೆ ಚಕಿತರಾಗಿ
ಹಾರು ಬಡಗಣಕೆ ನೀರ-ನಿಚುಲನೆಡೆಯಿಂದ ಮೇಲೆ ಅತ್ತ
ಹಾದಿಯಲ್ಲಿ ದಿಬ್‌ನಾಗ ಬೀಸಿದಾ ಕರವ ತಪ್ಪಿಸುತ್ತ
 
೧೫
 
ಏಳು ರತುನಗಳ ಮೇಳಗೂಡಿ ಕಂಗೊಳಿಸುವಂತೆ ಮುಂದು
ಹುತ್ತದಿಂದ ಎದ್ದಿರುವದಲ್ಲಿ ಅಗೋ ಇಂದ್ರಧನುವದೊಂದು
ನಿನ್ನ ಕಪ್ಪು ಮೈಗದರ ಒಪ್ಪ ಬರಲೇನು ಕಾಂತಿ ಬಂತು
ಗೋಪವೇಷದಾ ವಿಷ್ಣು, ಗರಿಯ ಧರಿಸಿರಲು ಕಾಣುವಂತು ।
 
೧೬
 
ಕುಡಿದು ಬಿಡುವರೋ ಕಣ್ಣ ಕುಡಿಗಳಲ್ಲಿ ಬೆಳೆಗೆ ಬಂಧು ಎಂದು
ಹುಬ್ಬ ಹಾರಿಸುವ ಬಿಂಕವಿಲ್ಲದಾ ಹಳ್ಳಿ ಹೆಂಗಳಂದು ।
ಅದೇ ಹರಗಿ ನೆಲಗಂಪ ಹರಹುವಾ ಹೊಲದ ಮಾಳವೇರಿ
ನೀರ ತಳಿಸಿ ಹಗುರಾಗಿ, ಉತ್ತರಕೆ ಮತ್ತೆ ಹೋಗು ಸಾರಿ
 
೧೭
 
ಮಾವುಮಲೆಯ ಕಡು ಕಾಡಬೇಗೆ ತವಿಸಿದ್ದೆ ಮಳೆಯ ಸುರಿಸಿ
ತಣಿಸದಿರುವದೇ ದಾರಿದಣಿವಿಕೆಯ, ಅದುವು ಕೆಳೆಯ ಸ್ಮರಿಸಿ ।
ಎಂಥ ಕಿರುಕುಳನು ಮೊದಲು ಮಾಡಿದುಪಕಾರ ಮರೆಯಬಹುದೇ
ಎಂದಮೇಲೆ ಅವನಂಥ ದೊಡ್ಡವನು ವಿಮುಖನಾಗಲಹುದೇ
 
೧೮
 
ತೊಳೆದ ತುರುಬು ಕಪ್ಪಾದ ನೀನು ಗಿರಿಶಿಖರದಲ್ಲಿ ತೇಲೆ
ಆಷಾಢ ಮಾವು ಸುರಿದಾವು ಗೊಂಚಲಲಿ ಬೆಟ್ಟದೆದೆಯ ಮೇಲೆ
ಅಮರ ಮಿಥುನಗಳ ಪ್ರಣಯ-ದೃಷ್ಟಿ ಅರಳರಳುವಂತೆ ಆಗೆ
ಮಲೆಯ ತುದಿಯು ಕಪ್ಪಾಗೆ ತೋರುವದು ನೆಲದ ಮೊಲೆಯ ಹಾಗೆ
ಕನ್ನಡ ಮೇಘದೂತ – ಭಾವಾನುವಾದ ಖಂಡಕಾವ್ಯ : ಲೇ : ದ ರಾ. ಬೇಂದ್ರೆ (ಅಂಬಿಕಾತನಯದತ್ತ) ೧೫